ADVERTISEMENT

ಅಧ್ಯಕ್ಷ ಸ್ಥಾನ: ಪರಮೇಶ್ವರ್ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2013, 19:30 IST
Last Updated 7 ಡಿಸೆಂಬರ್ 2013, 19:30 IST

ತುಮಕೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ­ದಲ್ಲಿ ತಮ್ಮನ್ನು ಮುಂದುವರಿಸು­ವುದು ಹೈಕಮಾಂಡ್‌ಗೆ ಸೇರಿದ ವಿಚಾರ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸು­ವಂತೆ ವರಿಷ್ಠರು ಸೂಚಿಸಿದ್ದಾರೆ. ಅದ­ರಂತೆ ಕೆಲಸ ಮಾಡುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಕರ್ತ-ರೊಂ­ದಿಗೆ ಮಾತನಾಡಿದ ಅವರು, ವಿಧಾನ­ಸಭೆ ಅಧಿವೇಶನದಲ್ಲಿ ಭಾಗವ­ಹಿ-­ಸದ ಕಾಂಗ್ರೆಸ್‌ ಶಾಸಕರು ಮತ್ತು ಸಚಿ­ವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಮಿತಿ ರಚನೆ ಮಾಡಲಾಗು­ವುದು. ಇದು ಪಕ್ಷದ ಆಂತರಿಕ ವಿಚಾರವಾಗಿದ್ದು, ಚರ್ಚೆ ನಡೆಸುವ ಅಗತ್ಯವಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.