
ಬೆಂಗಳೂರು: ರಾಜ್ಯ ಸರ್ಕಾರ ನೀಡುವ 2012ನೇ ಸಾಲಿನ ‘ಬಸವ ಪುರಸ್ಕಾರ’ಕ್ಕೆ ಹಿರಿಯ ಸಾಹಿತಿ ಡಾ. ಯು.ಆರ್. ಅನಂತಮೂರ್ತಿ, ‘ಜಕಣಾಚಾರಿ ಪ್ರಶಸ್ತಿಗೆ’ ಬಳ್ಳಾರಿ ಜಿಲ್ಲೆಯ ಶಿಲ್ಪ ಕಲಾವಿದ ಜಿ.ಬಿ. ಹಂಸಾನಂದಾಚಾರ್ಯ ಮತ್ತು ‘ಗುಬ್ಬಿ ವೀರಣ್ಣ’ ಪ್ರಶಸ್ತಿಗೆ ಧಾರವಾಡದ ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಬಸವ ಪುರಸ್ಕಾರ ₨ 10 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿದೆ. ಜಕಣಾಚಾರಿ ಮತ್ತು ಗುಬ್ಬಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ₨ 3 ಲಕ್ಷ ನಗದು ಹಾಗೂ ಸ್ಮರಣಿಕೆ, ಪ್ರಶಸ್ತಿ ಫಲಕ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. ಪುರಸ್ಕೃತರ ಆಯ್ಕೆಗೆ ಕ್ರಮವಾಗಿ ರಂಜಾನ್ ದರ್ಗಾ, ಕನಕಾ ಮೂರ್ತಿ, ಎಲ್.ಬಿ.ಕೆ. ಅಲ್ದಾಳ್ ಅಧ್ಯಕ್ಷತೆಯ ಸಮಿತಿ ರಚಿಸಲಾಗಿತ್ತು.
ಇನ್ನಷ್ಟು ಸುದ್ದಿ:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.