ಬೆಂಗಳೂರು: ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ₹100 ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದರು.
ವಿಧಾನಸಭೆಯಲ್ಲಿ ಬಜೆಟ್ ಚರ್ಚೆಗೆ ಉತ್ತರಿಸಿದ ಅವರು, ಕೊನೆಯ ಕ್ಷಣದಲ್ಲಿ ಬಿಜೆಪಿ ಸದಸ್ಯರ ಧರಣಿ ನಡುವೆ ಈ ವಿಷಯ ಪ್ರಕಟಿಸಿದರು.
ಕಳೆದ ಸೆಪ್ಟೆಂಬರ್ನಲ್ಲಿ ನೇಮಿಸಲಾಗಿದ್ದ ತಜ್ಞರ ಸಮಿತಿ ₹604 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.