ಪಿರಿಯಾಪಟ್ಟಣ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ 6 ಮಂದಿ ಸೇರಿ ಒಟ್ಟು 7 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಮೈಸೂರು- ಮಡಿಕೇರಿ ಹೆದ್ದಾರಿಯ ಮಂಚದೇವನಹಳ್ಳಿ ಬಳಿ ಗುರುವಾರ ಸಂಜೆ ನಡೆದಿದೆ.
ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದ ಮೈಸೂರು ಜಿಲ್ಲಾ ಪಂಚಾಯಿತಿ ಕೊಪ್ಪ ಕ್ಷೇತ್ರದ ಮಾಜಿ ಸದಸ್ಯ ಚೌಡಯ್ಯ (52) ಮೃತರಲ್ಲಿ ಸೇರಿದ್ದಾರೆ.
ಇನ್ನೊಂದು ಕಾರಿನಲ್ಲಿ ಪಿರಿಯಾಪಟ್ಟಣದ ಶಫಿ ಅಹಮ್ಮದ್ ಸುಂಟಿಕೊಪ್ಪದ ಪತ್ನಿ ಮನೆಗೆ ತೆರಳಿ ಕುಟುಂಬ ಸಮೇತರಾಗಿ ಕಾರಿನಲ್ಲಿ ಬರುತ್ತಿದ್ದಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.