ADVERTISEMENT

ಅಭಿವೃದ್ಧಿ ಕಾರ್ಯ ಚುರುಕು: ಸಿಎಂ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2012, 19:30 IST
Last Updated 6 ಆಗಸ್ಟ್ 2012, 19:30 IST

ಹುಬ್ಬಳ್ಳಿ: `ಬರಗಾಲ ಎದುರಿಸುತ್ತಿರುವ ರಾಜ್ಯದ 149 ತಾಲ್ಲೂಕುಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಇಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, `ಬರಪೀಡಿತ ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ಉಪ ಮುಖ್ಯಮಂತ್ರಿಗಳು ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಮುಂದಿನ ವಾರ ವಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಗೆ  ಭೇಟಿ ನೀಡಲಿದ್ದೇನೆ~ ಎಂದರು.

`ರೈತ ಸಮುದಾಯಕ್ಕೆ ನೆರವು ನೀಡುವ ಉದ್ದೇಶದಿಂದ ಸೊಸೈಟಿಗಳಿಂದ ಪಡೆದ ರೂ 25 ಸಾವಿರವರೆಗಿನ ಸಾಲ ಮನ್ನಾ ಮಾಡಲು ಸರ್ಕಾರದ ದಿಟ್ಟ ನಿರ್ಧಾರ ತೆಗೆದುಕೊಂಡಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.