ADVERTISEMENT

ಅಮಿತ್‌ ಷಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2017, 9:52 IST
Last Updated 11 ಜೂನ್ 2017, 9:52 IST
ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)
ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)   

ಹುಬ್ಬಳ್ಳಿ: ದೇಶವೇ ಮಹಾತ್ಮ ಎಂದು ಒಪ್ಪಿಕೊಂಡಿರುವ ಮಹಾತ್ಮ ಗಾಂಧೀಜಿ ಅವರನ್ನು ‘ಚತುರ ಬನಿಯಾ’ ಎಂದಿರುವುದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಮಾನಸಿಕ ಸ್ಥಿತಿ ತೋರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

‘ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ವಿರುದ್ಧ ಮಹಾನಗರ ಪಾಲಿಕೆಯ ಮಾಜಿ ಸದಸ್ಯರೊಬ್ಬರು ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ್ದಾರೆ. ದಾಖಲೆ ನೀಡದೆ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು.

ಜಾನುವಾರು ಮಾರಾಟದ ಮೇಲಿನ ನಿರ್ಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ  ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ನಿಯಮದಿಂದ ರೈತರಿಗೆ ಹೊರೆಯಾಗಲಿದೆ ಎಂದು ಅವರು ಹೇಳಿದರು.

ADVERTISEMENT

[Related]

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.