ದಾವಣಗೆರೆ: ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಸ್ಪರ್ಧೆ ನಡೆದರೆ ಅದರಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ನಂ.೧ ಇರುತ್ತದೆ ಎಂದು ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇವಲ ಎರಡು ಸೆಕೆಂಡ್ ಗಳಲ್ಲಿ ತಪ್ಪನ್ನು ತಿದ್ದಿಕೊಂಡು, ಸಿದ್ದರಾಮಯ್ಯ ಸರ್ಕಾರ ದೇಶದಲ್ಲೇ ನಂಬರ್ ೧ ಭ್ರಷ್ಟಾಚಾರ ಸರ್ಕಾರ ಎಂದು ಸಮಜಾಯಿಷಿ ನೀಡಿದರು.
ದಾವಣಗೆರೆಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಒಬ್ಬರು ದೇಶದಲ್ಲಿನ ಭ್ರಷ್ಟಾಚಾರ ಸರ್ಕಾರದ ಬಗ್ಗೆ ಮಾತನಾಡುತ್ತಾ ಕರ್ನಾಟಕ ಸರ್ಕಾರಕ್ಕೆ ಮೊದಲ ಸ್ಥಾನ ನೀಡಿದ್ದಾರೆ ಎಂದು ಹೇಳಲು ಹೋಗಿ , ಯಡಿಯೂರಪ್ಪ ಹೆಸರು ಉಲ್ಲೇಖಿಸಿದರು.
ಪಕ್ಕದಲ್ಲಿದ್ದ ಸಂಸದ ಪ್ರಹ್ಲಾದ ಜೋಶಿ ಮತ್ತು ಯಡಿಯೂರಪ್ಪ, ಸಿದ್ದರಾಮಯ್ಯ ಸರ್ಕಾರ ಎಂದು ಹೇಳುವಂತೆ ಕಿವಿಯಲ್ಲಿ ಉಸುರಿದರು.
ಆಗ ಶಾ, ತಪ್ಪನ್ನು ತಿದ್ದಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.