ಬೆಂಗಳೂರು: ಕಾವೇರಿ ಚಳವಳಿಯ ಕಾವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ.ಕೃಷ್ಣ ಅವರು ತಮ್ಮ ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿ ಸೋಮವಾರ ಬೆಳಿಗ್ಗೆ ದೆಹಲಿಗೆ ಬರಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ.ಕೃಷ್ಣ ಅವರು ರಾಜ್ಯದ ಕೆಲ ಪ್ರಮುಖರಿಗೆ ದೆಹಲಿಗೆ ಬರಲು ಸೂಚಿಸಿದ್ದು, ಎಲ್ಲರ ಜತೆ ಚರ್ಚೆ ನಡೆಸಿದ ನಂತರ ಪ್ರಧಾನಿಯನ್ನು ಭೇಟಿ ಮಾಡಲಿದ್ದಾರೆ. ಟಿ.ಬಿ.ಜಯಚಂದ್ರ, ಡಿ.ಕೆ.ಶಿವಕುಮಾರ್, ಬಿ.ಎಲ್.ಶಂಕರ್, ಪ್ರೊ.ಬಿ.ಕೆ.ಚಂದ್ರಶೇಖರ್ ಸೇರಿದಂತೆ ಇತರರು ಸೋಮವಾರ ಬೆಳಿಗ್ಗೆ ದೆಹಲಿಗೆ ತೆರಳುವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.