ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಏಪ್ರಿಲ್ 22ರಂದು ನಡೆಸಿದ್ದ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಇದೇ 15ರಂದು ಅರ್ಜಿ ರವಾನಿಸಲಾಗಿದೆ.
ಅರ್ಜಿಗಳನ್ನು ಭರ್ತಿ ಮಾಡಿ ಇದೇ 30ರೊಳಗೆ ಆಯೋಗಕ್ಕೆ ಸಲ್ಲಿಸಬೇಕು. ಅರ್ಜಿ ತಲುಪದಿದ್ದವರು ಇದೇ 20 ರಿಂದ 25ರೊಳಗೆ ಆಯೋಗದ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.