ಮೈಸೂರು: `ಕೇಂದ್ರ ಚುನಾವಣಾ ಆಯೋಗವು ಫೆಬ್ರುವರಿ ತಿಂಗಳಲ್ಲೇ ಚುನಾವಣೆ ನಡೆಸಿದರೆ ಅದಕ್ಕೆ ಬಿಜೆಪಿ ಸಿದ್ಧ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೋಮವಾರ ತಿಳಿಸಿದರು.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಶೆಟ್ಟರ್ ಅವರು, ಲಲಿತ ಮಹಲ್ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ಇದರಲ್ಲಿ ಅನುಮಾನ ಬೇಡ. ಮೊದಲೇ ಚುನಾವಣೆ ನಡೆದರೂ ಚಿಂತೆ ಇಲ್ಲ~ ಎಂದರು.
`ಬಿಜೆಪಿ ವರಿಷ್ಠ ಅಡ್ವಾಣಿ ವಿರುದ್ಧ ಖಾರವಾಗಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವುದು ಉತ್ತಮ ಬೆಳವಣಿಗೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
`ವಿಧಾನಸಭಾ ಕ್ಷೇತ್ರಗಳ ಆಧಾರದ ಮೇಲೆ ತಾಲ್ಲೂಕು ರಚನೆ ಆಗಬೇಕು ಎಂಬುದರ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ವಿಧಾನಸಭಾ ಕ್ಷೇತ್ರಗಳನ್ನು ತಾಲ್ಲೂಕುಗಳಾಗಿ ಮಾಡಬೇಕು ಎಂಬುದು ಸ್ಥಳೀಯ ಜನರ ಆಶಯವಾಗಿದೆ. ತಾಲ್ಲೂಕುಗಳ ರಚನೆಗೆ ಸಂಬಂಧಿಸಿದಂತೆ ಶೀಘ್ರವೇ ಸಂಪುಟ ಉಪ ಸಮಿತಿ ರಚಿಸಲಾಗುವುದು~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.