ADVERTISEMENT

ಅ.25ಕ್ಕೆ ಜಂಟಿ ಅಧಿವೇಶನ: ರಾಷ್ಟ್ರಪತಿ ಕೋವಿಂದ್ ಭಾಗಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2017, 19:30 IST
Last Updated 9 ಅಕ್ಟೋಬರ್ 2017, 19:30 IST
ನವದೆಹಲಿಯಲ್ಲಿ ಸೋಮವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿ ಮಾಡಿದ ವಿಧಾನಸಭೆಯ ಸ್ಪೀಕರ್‌ ಕೆ.ಬಿ. ಕೋಳಿವಾಡ ನೇತೃತ್ವದ ನಿಯೋಗವು, ವಿಧಾನಸೌಧದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿ, ವಿಧಾನಸೌಧದ ಪ್ರತಿಕೃತಿಯನ್ನು ನೀಡಿತು. ಐವಾನ್‌ ಡಿಸೋಜಾ, ಗಣೇಶ ಕಾರ್ಣಿಕ್‌, ಡಿ.ಎಚ್‌. ಶಂಕರಮೂರ್ತಿ ಚಿತ್ರದಲ್ಲಿದ್ದಾರೆ
ನವದೆಹಲಿಯಲ್ಲಿ ಸೋಮವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿ ಮಾಡಿದ ವಿಧಾನಸಭೆಯ ಸ್ಪೀಕರ್‌ ಕೆ.ಬಿ. ಕೋಳಿವಾಡ ನೇತೃತ್ವದ ನಿಯೋಗವು, ವಿಧಾನಸೌಧದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿ, ವಿಧಾನಸೌಧದ ಪ್ರತಿಕೃತಿಯನ್ನು ನೀಡಿತು. ಐವಾನ್‌ ಡಿಸೋಜಾ, ಗಣೇಶ ಕಾರ್ಣಿಕ್‌, ಡಿ.ಎಚ್‌. ಶಂಕರಮೂರ್ತಿ ಚಿತ್ರದಲ್ಲಿದ್ದಾರೆ   

ನವದೆಹಲಿ: ವಿಧಾನಸೌಧದ ವಜ್ರಮಹೋತ್ಸವದ ಅಂಗವಾಗಿ ಇದೇ 25ರಂದು ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಇದರಲ್ಲಿ ಭಾಗವಹಿಸಲಿದ್ದಾರೆ.

ವಿಧಾನಸಭೆಯ ಸ್ಪೀಕರ್ ಕೆ.ಬಿ. ಕೋಳಿವಾಡ ನೇತೃತ್ವದ ನಿಯೋಗ ಕೋವಿಂದ್‌ ಅವರಿಗೆ ಸೋಮವಾರ ಅಧಿಕೃತ ಆಹ್ವಾನ ಆಹ್ವಾನ ನೀಡಿತು.

ವಿಧಾನಸೌಧದ ವಜ್ರಮಹೋತ್ಸವ ಕಾರ್ಯಕ್ರಮವನ್ನು ಈ ತಿಂಗಳೇ ಆಯೋಜಿಸಲು ನಿರ್ಧರಿಸಲಾಗಿದೆ. ಈ ವೇಳೆ ನಡೆಯಲಿರುವ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಭಾಗಿಯಾಗುವಂತೆ ರಾಷ್ಟ್ರಪತಿಯವರಿಗೆ ಮನವಿ ಮಾಡಲಾಯಿತು. ರಾಜ್ಯ ಸರ್ಕಾರದ ಆಹ್ವಾನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಷ್ಟ್ರಪತಿಯವರು ಇದೇ 25ರಂದು ಜಂಟಿ ಅಧಿವೇಶನ ಆಯೋಜಿಸುವಂತೆ ಸಲಹೆ ನೀಡಿದ್ದು, ಭಾಗಿಯಾಗುವ ಭರವಸೆ ನೀಡಿದ್ದಾರೆ ಎಂದು ಕೆ.ಬಿ ಕೋಳಿವಾಡ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳ ಕಟ್ಟಡಗಳಲ್ಲಿ ಕರ್ನಾಟಕದ ವಿಧಾನಸೌಧದ ಕಟ್ಟಡ ಅತ್ಯಂತ ಆಕರ್ಷಣೀಯವಾಗಿದ್ದು, ವಾಸ್ತು ವೈಭವದಿಂದ ಕೂಡಿದೆ. ಆ ಸೌಧದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸಂತಸದ ವಿಷಯ ಎಂದು ರಾಷ್ಟ್ರಪತಿಯವರು ಹೇಳಿದ್ದಾಗಿ ಅವರು ವಿವರಿಸಿದರು.

ವಿಧಾನ ಪರಿಷತ್‌ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಸದಸ್ಯರಾದ ಐವಾನ್ ಡಿಸೋಜಾ, ಗಣೇಶ್ ಕಾರ್ಣಿಕ್‌ ಹಾಗೂ ವಿಧಾನ ಮಂಡಲದ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.