ADVERTISEMENT

ಆಗುಂಬೆಯಲ್ಲಿ 9 ಸೆಂ.ಮೀ ಮಳೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2012, 19:30 IST
Last Updated 23 ಜುಲೈ 2012, 19:30 IST

ಬೆಂಗಳೂರು:  ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಹಲವು ಪ್ರದೇಶಗಳು ಮತ್ತು ಉತ್ತರ ಒಳನಾಡಿನಲ್ಲಿ  ಮಳೆಯಾಗಿದೆ.

ಆಗುಂಬೆಯಲ್ಲಿ ಅತಿ ಹೆಚ್ಚು 9 ಸೆಂ.ಮೀ ಮಳೆಯಾಗಿದೆ. ಮೂಡಬಿದಿರೆ, ಸುಬ್ರಹ್ಮಣ್ಯ 6, ಬೆಳ್ತಂಗಡಿ, ಕೊಲ್ಲೂರು, ಸಿದ್ದಾಪುರ (ಉಡುಪಿ ಜಿಲ್ಲೆ), ಗೇರುಸೊಪ್ಪ, ಗೋಕರ್ಣ, ತೀರ್ಥಹಳ್ಳಿ 5, ಶೃಂಗೇರಿ 4, ಮಾಣಿ, ಧರ್ಮಸ್ಥಳ, ಸುಳ್ಯ, ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳ, ಕದ್ರಾ, ಕಮ್ಮರಡಿ 3, ಬಂಟ್ವಾಳ, ಕುಮಟಾ, ಯಲ್ಲಾಪುರ, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ), ಕಾರವಾರ, ಭಾಗಮಂಡಲ, ಮಡಿಕೇರಿ, ಲಿಂಗನಮಕ್ಕಿ, ತಾಳಗುಪ್ಪ, ಕಳಸ, ಕೊಟ್ಟಿಗೆಹಾರ, ಜಯಪುರ, ಕೊಪ್ಪ, ಎನ್.ಆರ್. ಪುರ, ಸಕಲೇಶಪುರ 2, ಪುತ್ತೂರು, ಉಪ್ಪಿನಂಗಡಿ, ಪಣಂಬೂರು, ಹೊನ್ನಾವರ, ಮಂಚಿಕೇರಿ, ಜಗಳಪೇಟೆ, ಲೊಂಡ, ನಾಪೋಕ್ಲು, ವಿರಾಜಪೇಟೆ, ಕುಶಾಲನಗರ, ಮಾದಾಪುರ, ಸರಗೂರು, ತ್ಯಾಗರ್ತಿ, ಸೊರಬ, ಶಿರಾಳಕೊಪ್ಪದಲ್ಲಿ 1 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಪ್ರದೇಶಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.