ADVERTISEMENT

ಆದಿಚುಂಚನಗಿರಿಜಾತ್ರೆ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 19:30 IST
Last Updated 8 ಮಾರ್ಚ್ 2014, 19:30 IST

ನಾಗಮಂಗಲ: ತಾಲ್ಲೂಕಿನ ಪುರಾಣ ಪ್ರಸಿದ್ಧ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಮಾರ್ಚ್‌ 9 ರಿಂದ 9 ದಿನಗಳ ಕಾಲ ನಡೆಯಲಿದೆ.

ಜಾತ್ರೆಯಲ್ಲಿ ನಿತ್ಯ ಅನ್ನದಾಸೋಹ ನಡೆಯಲಿದೆ. ಭಕ್ತರಿಗೆ ಅಡಚಣೆ ಉಂಟಾಗದಂತೆ 5 ಕಡೆ ವಿಶೇಷ ಗ್ಯಾಲರಿ ನಿರ್ಮಿಸಿ ಅನ್ನದಾಸೋಹ ನಡೆಸಲಾಗುವುದು.

ಪ್ರತಿ ವರ್ಷದಂತೆ ಈ ವರ್ಷವೂ ಕೃಷಿಮೇಳ ಏರ್ಪಡಿಸಲಾಗಿದೆ. ಕೃಷಿ­ಯಲ್ಲಿ ಇದುವರೆಗಿನ ಆವಿಷ್ಕಾರ­ಗಳು, ಆಧುನಿಕ ಕೃಷಿ ಪದ್ಧತಿ, ಆಧುನಿಕ ಯಂತ್ರಗಳ ಬಳಕೆ ಮುಂತಾದ ವಿಷಯಗಳ ಬಗ್ಗೆ ಪ್ರತಿದಿನ ಕೃಷಿ ತಜ್ಞರು, ಕೃಷಿ ವಿಜ್ಞಾನಿಗಳು, ಕುಲಪತಿಗಳು ಭಾಗವಹಿಸಿ ರೈತರಿಗೆ ಮಾಹಿತಿ ನೀಡಿ, ಸಂವಾದ ನಡೆಸಲಿದ್ದಾರೆ.

ಕೃಷಿ ವಿಜ್ಞಾನ ಮೇಳದಲ್ಲಿ ರೈತರಿಗೆ ಉಪಯುಕ್ತವಾಗುವ ಅನೇಕ  ಮಳಿಗೆಗಳು ಇರುವುದು ಈ ಜಾತ್ರೆಯ ಹತ್ತು ಹಲವು ಆಕರ್ಷಣೆಗಳಲ್ಲಿ ಒಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.