
ಪ್ರಜಾವಾಣಿ ವಾರ್ತೆನಾಗಮಂಗಲ: ತಾಲ್ಲೂಕಿನ ಪುರಾಣ ಪ್ರಸಿದ್ಧ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಮಾರ್ಚ್ 9 ರಿಂದ 9 ದಿನಗಳ ಕಾಲ ನಡೆಯಲಿದೆ.
ಜಾತ್ರೆಯಲ್ಲಿ ನಿತ್ಯ ಅನ್ನದಾಸೋಹ ನಡೆಯಲಿದೆ. ಭಕ್ತರಿಗೆ ಅಡಚಣೆ ಉಂಟಾಗದಂತೆ 5 ಕಡೆ ವಿಶೇಷ ಗ್ಯಾಲರಿ ನಿರ್ಮಿಸಿ ಅನ್ನದಾಸೋಹ ನಡೆಸಲಾಗುವುದು.
ಪ್ರತಿ ವರ್ಷದಂತೆ ಈ ವರ್ಷವೂ ಕೃಷಿಮೇಳ ಏರ್ಪಡಿಸಲಾಗಿದೆ. ಕೃಷಿಯಲ್ಲಿ ಇದುವರೆಗಿನ ಆವಿಷ್ಕಾರಗಳು, ಆಧುನಿಕ ಕೃಷಿ ಪದ್ಧತಿ, ಆಧುನಿಕ ಯಂತ್ರಗಳ ಬಳಕೆ ಮುಂತಾದ ವಿಷಯಗಳ ಬಗ್ಗೆ ಪ್ರತಿದಿನ ಕೃಷಿ ತಜ್ಞರು, ಕೃಷಿ ವಿಜ್ಞಾನಿಗಳು, ಕುಲಪತಿಗಳು ಭಾಗವಹಿಸಿ ರೈತರಿಗೆ ಮಾಹಿತಿ ನೀಡಿ, ಸಂವಾದ ನಡೆಸಲಿದ್ದಾರೆ.
ಕೃಷಿ ವಿಜ್ಞಾನ ಮೇಳದಲ್ಲಿ ರೈತರಿಗೆ ಉಪಯುಕ್ತವಾಗುವ ಅನೇಕ ಮಳಿಗೆಗಳು ಇರುವುದು ಈ ಜಾತ್ರೆಯ ಹತ್ತು ಹಲವು ಆಕರ್ಷಣೆಗಳಲ್ಲಿ ಒಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.