ADVERTISEMENT

ಆನಂದ್ ಸಿಂಗ್‌ ಒಡೆತನದ ಬಾದಾಮಿಯ ಕೃಷ್ಣಾ ಹೆರಿಟೇಜ್‌ ರೆಸಾರ್ಟ್‌ ಮೇಲೆ ಐಟಿ ದಾಳಿ

ಇದೇ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಮೇ 2018, 3:41 IST
Last Updated 8 ಮೇ 2018, 3:41 IST
ಆನಂದ್ ಸಿಂಗ್‌ ಒಡೆತನದ ಬಾದಾಮಿಯ ಕೃಷ್ಣಾ ಹೆರಿಟೇಜ್‌ ರೆಸಾರ್ಟ್‌ ಮೇಲೆ ಐಟಿ ದಾಳಿ
ಆನಂದ್ ಸಿಂಗ್‌ ಒಡೆತನದ ಬಾದಾಮಿಯ ಕೃಷ್ಣಾ ಹೆರಿಟೇಜ್‌ ರೆಸಾರ್ಟ್‌ ಮೇಲೆ ಐಟಿ ದಾಳಿ   

ಬಾದಾಮಿ: ಬಾದಾಮಿಯಲ್ಲಿರುವ ಹೊಸಪೇಟೆ (ವಿಜಯನಗರ) ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಸೋಮವಾರ ತಡರಾತ್ರಿ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಹುಬ್ಬಳ್ಳಿ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ಎರಡು ದಿನಗಳ ಹಿಂದೆ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣಾ ಹೆರಿಟೇಜ್ ಕಾಂಗ್ರೆಸ್ ಮುಖಂಡರ ಕಾರ್ಯಕ್ಷೇತ್ರವಾಗಿತ್ತು.

</p><p>ಐಟಿ ಅಧಿಕಾರಿಗಳ ದಾಳಿ ವೇಳೆ ರೆಸಾರ್ಟ್‌ನಲ್ಲಿ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ವಾಸ್ತವ್ಯ ಹೂಡಿದ್ದರು ಎಂದು ತಿಳಿದುಬಂದಿದೆ. ದಾಖಲೆಗಳ ಪರಿಶೀಲನೆ ಈಗಲೂ ಮುಂದುವರೆದಿದ್ದು, ಅರೆಸೇನಾ ಪಡೆ ಹಾಗೂ ಸ್ಥಳೀಯ ಪೊಲೀಸರು ರೆಸಾರ್ಟ್‌ಗೆ ಭದ್ರತೆ ಒದಗಿಸಿದ್ದಾರೆ.</p></p>

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.