ADVERTISEMENT

ಆರು ಅಧಿಕಾರಿಗಳ ಮೇಲೆ ದಾಳಿ

22 ಸ್ಥಳಗಳಲ್ಲಿ ಶೋಧಿಸುತ್ತಿರುವ ಎಸಿಬಿ ಪೊಲೀಸರು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2018, 19:30 IST
Last Updated 10 ಏಪ್ರಿಲ್ 2018, 19:30 IST
ಆರು ಅಧಿಕಾರಿಗಳ ಮೇಲೆ ದಾಳಿ
ಆರು ಅಧಿಕಾರಿಗಳ ಮೇಲೆ ದಾಳಿ   

ಬೆಂಗಳೂರು: ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ‍‍ ಪೊಲೀಸರು, ಕೆಪಿಟಿಸಿಎಲ್‌ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಲ್ಲಿಕಾರ್ಜುನ ಎನ್. ಸವಣೂರ (ಹುಬ್ಬಳ್ಳಿ) ಒಳಗೊಂಡಂತೆ ಆರು ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿದ್ದಾರೆ.

ವಿಶ್ವಾಸಾರ್ಹ ಮಾಹಿತಿ ಆಧರಿಸಿ ಸವಣೂರ ಅವರ ಹುಬ್ಬಳ್ಳಿಯ ಶಿರೂರ ಪಾರ್ಕಿನ ವಾಸದ ಮನೆ ಸೇರಿ ಮೂರು ಮನೆ, ಅಂಗಡಿ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಅಲ್ಲದೆ, ಆರು ಅಧಿಕಾರಿಗಳಿಗೆ ಸಂಬಂಧಿಸಿದ 22 ಸ್ಥಳಗಳಲ್ಲೂ ಶೋಧಿಸಲಾಗುತ್ತಿದ್ದು, ಆಸ್ತಿಪಾಸ್ತಿಯ ದಾಖಲೆ ಪತ್ರಗಳನ್ನು ‍‍ಪರಿಶೀಲಿಸಲಾಗುತ್ತಿದೆ. ಈ ಅಧಿಕಾರಿಗಳ ಹೆಸರನ್ನು ಎಸಿಬಿ ಬಿಡುಗಡೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT