ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರಿಂದ ದಾಳಿಗೆ ಒಳಗಾಗಿರುವ ಬಿಬಿಎಂಪಿ ಕಂದಾಯ ನಿರೀಕ್ಷಕ ಜಿ.ಎಂ.ಶಿವಕುಮಾರ್ ಬೆಂಗಳೂರಿನ ವಾಜರಹಳ್ಳಿಯಲ್ಲಿ ಎರಡು ವಸತಿ ಸಂಕೀರ್ಣ ಹಾಗೂ ನಾಲ್ಕು ನಿವೇಶನಗಳನ್ನು ಹೊಂದಿದ್ದಾರೆ.
ಎಸಿಬಿ ಅಧಿಕಾರಿಗಳು ಮಂಗಳವಾರ ಶಿವಕುಮಾರ್ ಹಾಗೂ ಕೆಪಿಟಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಲ್ಲಿಕಾರ್ಜುನ ಎನ್. ಸವಣೂರ (ಹುಬ್ಬಳ್ಳಿ) ಒಳಗೊಂಡಂತೆ ಆರು ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು.
ಶಿವಕುಮಾರ್ ವಾರ್ಡ್ ನಂಬರ್ 198ರ ಕಂದಾಯ ನಿರೀಕ್ಷಕರಾಗಿದ್ದಾರೆ. ಮೂರು ದಿನಗಳಿಂದಲೂ ಆರು ಅಧಿಕಾರಿಗಳಿಗೆ ಸಂಬಂಧಿಸಿದ 22 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಆದಾಯ ಮೀರಿದ ಆಸ್ತಿಪಾಸ್ತಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಪತ್ತೆ ಮಾಡಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.