ADVERTISEMENT

ಆರ್‌ಎಸ್‌ಎಸ್ ಪ್ರಾಂತ ಸಂಘಚಾಲಕರಾಗಿ ವೆಂಕಟರಾಮ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2011, 19:30 IST
Last Updated 24 ಅಕ್ಟೋಬರ್ 2011, 19:30 IST

ಬೆಂಗಳೂರು: ಹಿರಿಯ ಸಾಮಾಜಿಕ ಕಾರ್ಯಕರ್ತ ಎಂ. ವೆಂಕಟರಾಮ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಪ್ರಾಂತ ಸಂಘಚಾಲಕರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಚುನಾಯಿತರಾಗಿದ್ದಾರೆ.

ಆರ್‌ಎಸ್‌ಎಸ್‌ನ ರಾಜ್ಯ ಕಚೇರಿ `ಕೇಶವ ಕೃಪಾ~ದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ವೆಂಕಟರಾಮ ಅವರು ಪ್ರಾಂತ ಸಂಘಚಾಲಕರಾಗಿ ಅವಿರೋಧವಾಗಿ ಪುನರಾಯ್ಕೆಯಾದರು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ವೆಂಕಟರಾಮ  2006ರಿಂದಲೂ ಪ್ರಾಂತ ಸಂಘಚಾಲಕ ಹುದ್ದೆಯಲ್ಲಿದ್ದಾರೆ. ಡಾ. ವಾಮನ ಶೆಣೈ ಮಂಗಳೂರು ವಿಭಾಗದ ನೂತನ ಸಂಘಚಾಲಕರಾಗಿ ಚುನಾಯಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.