ADVERTISEMENT

ಇಂದಿನಿಂದ ಜೆಡಿಎಸ್ ಯುವ ಚೇತನ ಯಾತ್ರೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2012, 19:30 IST
Last Updated 21 ಫೆಬ್ರುವರಿ 2012, 19:30 IST

ಬೆಂಗಳೂರು:  ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ `ನವಶಕ್ತಿ ಸಂಚಲನ-ದಾವಣಗೆರೆಯಲ್ಲಿ ಮಿಲನ~ ಹೆಸರಿನಲ್ಲಿ ಯುವಚೇತನ ಯಾತ್ರೆ ಬುಧವಾರ ಬೀದರ್‌ನಿಂದ ಆರಂಭಗೊಂಡು ಏಪ್ರಿಲ್ 22ರಂದು ದಾವಣಗೆರೆಯಲ್ಲಿ ಕೊನೆಗೊಳ್ಳಲಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಪ್ರವಾಸದಲ್ಲಿ ಪಾಲ್ಗೊಳ್ಳುವ ಯುವ ಮುಖಂಡರ ತಂಡ ಮಂಗಳವಾರ ಪಕ್ಷದ ಕೇಂದ್ರ ಕಚೇರಿಯಿಂದ ನೇರವಾಗಿ ಬೀದರ್‌ಗೆ ತೆರಳಿದೆ. ಅಲ್ಲಿಂದ ಶುರುವಾಗುವ ಯಾತ್ರೆ ರಾಯಚೂರು, ಕೊಪ್ಪಳ, ಗುಲ್ಬರ್ಗ, ಯಾದಗಿರಿ ಸೇರಿದಂತೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಂಚರಿಸಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ದಾವಣಗೆರೆಯಲ್ಲಿ ರಾಜ್ಯಮಟ್ಟದ ಬೃಹತ್ ಯುವ ಸಮಾವೇಶ ನಡೆಯಲಿದ್ದು, ಸುಮಾರು ಎರಡು ಲಕ್ಷದಷ್ಟು ಯುವ ಜನರು ಭಾಗವಹಿಸಲಿದ್ದಾರೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೆಚ್ಚು ಜನರನ್ನು ಸಂಘಟಿಸುವ ಯುವಕರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆದ್ಯತೆ ನೀಡಲಾಗುವುದು.

ಈ ನಿಟ್ಟಿನಲ್ಲಿ ಸಮರ್ಥ ಯುವಕರನ್ನು ಗುರುತಿಸುವಂತೆ ಹಿರಿಯ ನಾಯಕರು ಮಧು ಅವರಿಗೆ ಸೂಚನೆ ನೀಡಿದ್ದಾರೆ ಎಂದರು.

ಮುಖಂಡರಾದ ಸಿ.ನಾರಾಯಣಸ್ವಾಮಿ, ನಟಿ ಪೂಜಾ ಗಾಂಧಿ ಮತ್ತಿತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.