ಮಂಗಳೂರು:>ನಗರದ ಕೊಟ್ಟಾರದ ಬಳಿ ಇರುವ ಇನ್ಫೊಸಿಸ್ ಕಚೇರಿಗೆ ಗುರುವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಆತಂಕದ ಪರಿಸ್ಥಿತಿ ಉಂಟಾಯಿತು. ಸೈರನ್ ಬಳಿಕ ಕಚೇರಿಯಿಂದ ಸಿಬ್ಬಂದಿ ಆತಂಕದಿಂದ ಹೊರಬಂದರು.
ಎಸಿಪಿ ಕವಿತಾ ನೇತೃತ್ವದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ತಪಾಸಣೆ ಮಾಡಿದರು. ಸ್ಥಳಕ್ಕೆ ಶ್ವಾನದಳವನ್ನೂ ಕರೆ ತಂದಿದ್ದು ತಪಾಸಣೆ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.