ಬೆಂಗಳೂರು: ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಮತ್ತು ಐಎಫ್ಎಸ್ ಅಧಿಕಾರಿ ಆರ್.ರವಿಶಂಕರ್ ಅವರನ್ನು ಮಸ್ಸೂರಿಯ ಲಾಲ್ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ತರಬೇತಿ ಅಕಾಡೆಮಿಯ ಉಪ ನಿರ್ದೇಶಕರಾಗಿ ನಿಯೋಜಿಸಲಾಗಿದೆ.
ನಾಲ್ಕು ವರ್ಷಗಳ ಕಾಲ ನಿಯೋಜನೆ ಮೇಲೆ ಇರಲು ಈ ಅಧಿಕಾರಿಗಳಿಗೆ ಅನುಮತಿ ನೀಡಲಾಗಿದೆ. ಐಎಎಸ್ ಅಧಿಕಾರಿ ಪಿ.ಐ.ಶ್ರೀವಿದ್ಯಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗ ಮಾಡಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
ಐಪಿಎಸ್ ವರ್ಗ: ಅಗ್ನಿ ಶಾಮಕ ದಳದ ಡಿಐಜಿ ಎಚ್.ಎಸ್.ರೇವಣ್ಣ ಅವರನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಭದ್ರತೆ ಮತ್ತು ವಿಚಕ್ಷಣ ವಿಭಾಗದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.