ADVERTISEMENT

ಇವಿಎಂ ಬೇಡ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2017, 19:30 IST
Last Updated 15 ಡಿಸೆಂಬರ್ 2017, 19:30 IST
ಇವಿಎಂ ಬೇಡ: ಕುಮಾರಸ್ವಾಮಿ
ಇವಿಎಂ ಬೇಡ: ಕುಮಾರಸ್ವಾಮಿ   

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತ ಯಂತ್ರದ (ಇವಿಎಂ) ಬದಲಿಗೆ ಮತ ಪತ್ರ ಬಳಸಬೇಕು ಎಂಬ ಕಾಂಗ್ರೆಸ್‌ ಒತ್ತಾಯಕ್ಕೆ ಜೆಡಿಎಸ್‌ ಧ್ವನಿಗೂಡಿಸಿದೆ.

ಶುಕ್ರವಾರ ಪಕ್ಷದ ಪ್ರಮುಖರ ಸಭೆಯ ಬಳಿಕ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸುದ್ದಿಗಾರರ ಜತೆ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಎರಡು ವರ್ಷಗಳಿಂದ ಮತ ಪತ್ರವನ್ನು ಬಳಸುವಂತೆ ಒತ್ತಾಯಿಸುತ್ತಲೇ ಬಂದಿದ್ದಾರೆ ಎಂದರು.

ಅಮೆರಿಕಾದಂತಹ ಮುಂದುವರಿದ ದೇಶಗಳಲ್ಲೇ ಮತ ಪತ್ರವನ್ನು ಬಳಸುತ್ತಿದ್ದಾರೆ. ಇವಿಎಂ ಬಗ್ಗೆ ಬಹಳಷ್ಟು ರಾಜಕೀಯ ಪಕ್ಷಗಳು ಅನುಮಾನ ವ್ಯಕ್ತಪಡಿಸಿವೆ. ಪಾರದರ್ಶಕವಾಗಿ ಚುನಾವಣೆ ನಡೆಸಲು ಹಳೆಯ ಚುನಾವಣಾ ಪದ್ಧತಿಯನ್ನೇ ಆರಂಭಿಸಬೇಕು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.