ADVERTISEMENT

ಈಜಲು ಹೋದ 3 ಬಾಲಕರ ಸಾವು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 19:30 IST
Last Updated 11 ಅಕ್ಟೋಬರ್ 2011, 19:30 IST

ಭಾಲ್ಕಿ: ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಕೋನ ಮೇಳಕುಂದಾ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಸಾಯಂಕಾಲ ಸಂಭವಿಸಿದೆ. ಮೃತರನ್ನು ವೆಂಕಟ ಅವರ ಪುತ್ರ ಮಹೇಶ (11) ಅರ್ಜುನರ ಪುತ್ರ ಸಚಿನ್ (11) ವಿಠಲ ಅವರ ಮಗ ಪವನ (10) ಎಂದು ಗುರುತಿಸಲಾಗಿದೆ. ಇವರು 6ನೇ ತರಗತಿಯಲ್ಲಿ  ಓದುತ್ತಿದ್ದರು.

ಗ್ರಾಮದ ಹೊರವಲಯದಲ್ಲಿನ ಕಲ್ಲಿನ ಕೋರೆಯ ಬಳಿ ನೀರು ಸಂಗ್ರಹವಾಗಿದ್ದ ಸ್ಥಳದಲ್ಲಿ ಇವರು ಈಜಲು ಹೋಗಿದ್ದರು. ಈಜು ಬಾರದೆ ಸೆಳೆತಕ್ಕೆ ಸಿಲುಕಿದ್ದು ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಧನ್ನೂರಾ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಯಾತನೂರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.