ಬೆಂಗಳೂರು: ಈದ್ ಮಿಲಾದ್ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜ್ಯದೆಲ್ಲೆಡೆ ಶನಿವಾರ ಈದ್ ಅಂಗವಾಗಿ ಮೆರವಣಿಗೆ ನಡೆಯುತ್ತಿವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸಾವಿರಾರು ಜನ; ಪೊಲೀಸ್ ಸರ್ಪಗಾವಲು
ಚಿಕ್ಕಮಗಳೂರು: ನಗರದಲ್ಲಿ ಈದ್ ಮಿಲಾದ್ ಅಂಗವಾಗಿ ಮೆರವಣಿಗೆ ನಡೆಯುತ್ತಿದ್ದು, ಆಜಾದ್ ಪಾರ್ಕ್ ವೃತ್ತದ ಮೂಲಕ ಮೆರವಣಿಗೆ ಸಾಗಿತು.
ಮೆರವಣಿಗೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದಾರೆ. ಮೆರವಣಿಗೆ ಅಂಗವಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಮೆರವಣಿಗೆ
ಹೊಸಪೇಟೆ: ಈದ್ ಮಿಲಾದ್ ಅಂಗವಾಗಿ ಶನಿವಾರ ಮೆರವಣಿಗೆ ನಡೆಸಲಾಯಿತು. ಸಹಸ್ರಾರು ಮುಸ್ಲಿಮರು ಪಾಲ್ಗೊಂಡಿದ್ದಾರೆ.
ನಗರದ ವಾಲ್ಮೀಕಿ ವೃತ್ತದಿಂದ ಮೆರವಣಿಗೆ ಮುಂದೆ ಸಾಗಿತು. ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.