ಸಿದ್ದಾಪುರ (ಉತ್ತರ ಕನ್ನಡ): ತಾಲ್ಲೂಕಿನ ಜೋಗಿನಮಠ(ಹೊನ್ನಾವರ-ತುಮಕೂರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಜೋಗ ಸಮೀಪ) ರಸ್ತೆ ಪಕ್ಕದ ಧರೆ ಬುಧವಾರ ನಸುಕಿನಲ್ಲಿ ಕುಸಿದಿದೆ.
ಸುಮಾರು 9 ಮರಗಳು ರಸ್ತೆಗೆ ಅಡ್ಡವಾಗಿ ಬಿದ್ದುದರಿಂದ ಸುಮಾರು 5-6 ತಾಸು ಸಂಚಾರ ಸ್ಥಗಿತಗೊಂಡಿತು.
ರಾಷ್ಟ್ರೀಯ ಹೆದ್ದಾರಿ ಇಲಾಖೆ,ಅರಣ್ಯ ಇಲಾಖೆ ಸಿಬ್ಬಂದಿ ರಸ್ತೆ ಯನ್ನು ತೆರವು ಗೊಳಿಸಿ,ಸಂಚಾರಕ್ಕೆ ಮುಕ್ತ ಗೊಳಿಸಿದರು. ತಹಶೀಲ್ದಾರ್ ಪಟ್ಟರಾಜ ಗೌಡ ಸ್ಥಳಕ್ಕೆ ಧಾವಿಸಿ,ಪರಶೀಲನೆ ನಡೆಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.