ADVERTISEMENT

ಉದ್ಯಮಿ ಶೆಟ್ಟಿಗೆ ‘ಮಾನವತಾವಾದಿ ಶ್ರೀ ಬಸವೇಶ್ವರ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2018, 19:30 IST
Last Updated 15 ಏಪ್ರಿಲ್ 2018, 19:30 IST
ಉದ್ಯಮಿ ಶೆಟ್ಟಿಗೆ ‘ಮಾನವತಾವಾದಿ ಶ್ರೀ ಬಸವೇಶ್ವರ’ ಪ್ರಶಸ್ತಿ
ಉದ್ಯಮಿ ಶೆಟ್ಟಿಗೆ ‘ಮಾನವತಾವಾದಿ ಶ್ರೀ ಬಸವೇಶ್ವರ’ ಪ್ರಶಸ್ತಿ   

ಗದಗ: ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿಯ ಪ್ರತಿಭಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಮಾನವತಾವಾದಿ ಶ್ರೀ ಬಸವೇಶ್ವರ ಪ್ರಶಸ್ತಿ’ಗೆ ಚಿಕ್ಕಮಗಳೂರು ಜಿಲ್ಲೆಯ ಬೇಗಾರ ಗ್ರಾಮದ ಹೋಟೆಲ್‌ ಉದ್ಯಮಿ ಸುಧಾಕರ ಎಸ್. ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ತಾಮ್ರ ಪತ್ರವನ್ನು ಒಳಗೊಂಡಿದೆ.

ಶೆಟ್ಟಿ ಅವರ ಸಮಾಜ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಎಲ್. ಲಿಂಬಯ್ಯಸ್ವಾಮಿಮಠ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.