ADVERTISEMENT

ಉರುಳಿಬಿದ್ದ ಅನಿಲ ಸಾಗಣೆ ಟ್ಯಾಂಕರ್‌ : ಉಜಿರೆ–ಚಾರ್ಮಾಡಿ ಘಾಟಿ ಮಾರ್ಗ ಬಂದ್‌

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2018, 13:48 IST
Last Updated 9 ಮಾರ್ಚ್ 2018, 13:48 IST
ಅನಿಲ ಸೋರಿಕೆ ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿಶಾಮಕ ಠಾಣೆಯ ತಂಡ.
ಅನಿಲ ಸೋರಿಕೆ ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿಶಾಮಕ ಠಾಣೆಯ ತಂಡ.   

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಮಡಂತ್ಯಾರ್ ಸಮೀಪದ ಪಣಕಜೆಯಲ್ಲಿ ಶುಕ್ರವಾರ ಮಧ್ಯಾಹ್ನ ಎಲ್‌.ಪಿ.ಜಿ. ಅನಿಲ ಸಾಗಣೆ ಟ್ಯಾಂಕರ್ ಉರುಳಿ ಬಿದ್ದಿದೆ.

ಉಜಿರೆ, ಚಾರ್ಮಾಡಿ ಘಾಟಿ ಮಾರ್ಗವಾಗಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮಧ್ಯಾಹ್ನ 2.30ರ ಸುಮಾರಿಗೆ ಉರುಳಿ ಬಿದ್ದಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆ ಆಗುತ್ತಿದೆ.

ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ತಂಡ ಸ್ಥಳಕ್ಕೆ ಧಾವಿಸಿದ್ದು, ಅನಿಲ ‌ಸೋರಿಕೆ ನಿಯಂತ್ರಣಕ್ಕೆ ಕಾರ್ಯಾಚರಣೆ ಆರಂಭಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.