ADVERTISEMENT

ಎಚ್‌ಡಿಕೆ ಮಾತಿಗೆ ತಪ್ಪಿದರೆ ಹೋರಾಟ: ರೈತಸಂಘ

​ಪ್ರಜಾವಾಣಿ ವಾರ್ತೆ
Published 22 ಮೇ 2018, 19:30 IST
Last Updated 22 ಮೇ 2018, 19:30 IST
ಎಚ್‌ಡಿಕೆ ಮಾತಿಗೆ ತಪ್ಪಿದರೆ ಹೋರಾಟ: ರೈತಸಂಘ
ಎಚ್‌ಡಿಕೆ ಮಾತಿಗೆ ತಪ್ಪಿದರೆ ಹೋರಾಟ: ರೈತಸಂಘ   

ರಾಯಚೂರು: ‘ಚುನಾವಣೆಗೂ ಮುನ್ನ ಕೊಟ್ಟ ಭರವಸೆಯಂತೆ, ಅಧಿಕಾರಕ್ಕೆ ಬಂದ 24 ಗಂಟೆಗಳೊಳಗಾಗಿ ರೈತರ ಸಾಲಮನ್ನಾ ಮಾಡದೇ ಹೋದರೆ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಹಸಿರುಸೇನೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಹೇಳಿದ್ದಾರೆ.

‘ಚುನಾವಣೆಯಲ್ಲಿ ರೈತರಿಗೆ ಭರವಸೆ ನೀಡಿ ಮತಗಳನ್ನು ಪಡೆದಿರುವ ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಅವರಿಗೆ ಮೋಸ ಮಾಡಬಾರದು. ಕೊಟ್ಟ ಮಾತಿಗೆ ತಪ್ಪಿದರೆ, ಅವರು ಹೋದೆಡೆ ರೈತರು ಪ್ರತಿಭಟನೆ ನಡೆಸಲಿದ್ದಾರೆ’ ಎಂದು ತಿಳಿಸಿದ್ದಾರೆ.

‘ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ಇಡೀ ರೈತ ಸಮೂಹ ಕಾಯುತ್ತಿದೆ. ರೈತರ ಆಶಾಕಿರಣವಾಗಿ ಗಮನ ಸೆಳೆದಿರುವ ಜೆಡಿಎಸ್‌ ಪಕ್ಷವು ಅವರಿಗೆ ನಿರಾಸೆ ಮಾಡಬಾರದು’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.