ADVERTISEMENT

ಎಡೆಯೂರಿನಲ್ಲಿ ವೈಭವದ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 19:20 IST
Last Updated 24 ಮಾರ್ಚ್ 2018, 19:20 IST
ಎಡೆಯೂರಿನಲ್ಲಿ ವೈಭವದ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ
ಎಡೆಯೂರಿನಲ್ಲಿ ವೈಭವದ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ   

ಕುಣಿಗಲ್: ತಾಲ್ಲೂಕಿನ ಎಡೆಯೂರು ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಸ್ವಾಮಿ ಗದ್ದುಗೆ ಮತ್ತು ಕಲ್ಲುಗಾಲಿ ರಥಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹರಾಜು ಪ್ರಕ್ರಿಯೆಯಲ್ಲಿ ಷಟ್‌ಸ್ಥಲ ಧ್ವಜವನ್ನು ₹ 3.26 ಲಕ್ಷಕ್ಕೆ ಬೆಳಗಾವಿಯ ಚಂದ್ರಶೇಖರ್ ಪಡೆದರು.

ಬಾಳೆಹೊನ್ನೂರು ಶಾಖಾಮಠದ ರೇಣುಕಾ ಶಿವಚಾರ್ಯ ಸ್ವಾಮೀಜಿ, ಕುಪ್ಪೂರು ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಮಠದ ಡಾ.ಅಭಿನವ ಸಿದ್ದಲಿಂಗ ಶಿವಾಚಾರ್ಯಸ್ವಾಮೀಜಿ, ದೊಡ್ಡಗುಣಿ ರೇವಣಸಿದ್ದ ಶಿವಾಚಾರ್ಯಸ್ವಾಮೀಜಿ, ಬೆಳ್ಳಾವಿ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಅಂಕನಹಳ್ಳಿ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯನಿರ್ವಹಣಾಧಿಕಾರಿ ಆರತಿ ಆನಂದ್, ತಹಶೀಲ್ದಾರ್ ನಾಗರಾಜ್ ನಂದಿಧ್ವಜ ಪೂಜೆ ನೆರವೇರಿಸಿದ ನಂತರ ಉತ್ಸವಕ್ಕೆ ಚಾಲನೆ ನೀಡಲಾಯಿತು.

ADVERTISEMENT

ಭಕ್ತರು ರಥ ಎಳೆದು, ದವನ, ಬಾಳೆ ಹಣ್ಣು, ಕಾಳು ಮೆಣಸು ತೂರಿ ಸಂಭ್ರಮಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.