ಮಂಗಳೂರು: ಡಿವಿಜಿ ಬಳಗ ಪ್ರತಿಷ್ಠಾನ ವತಿಯಿಂದ ಸಾಹಿತಿ ಎ.ನರಸಿಂಹ ಭಟ್ ಅವರಿಗೆ ಡಿವಿಜಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅವರಿಗೆ ಪ್ರಶಸ್ತಿ ಪತ್ರ ಹಾಗೂ ಡಿವಿಜಿ ಅವರ ಕೃತಿ ಸಂಪುಟ ಮತ್ತು ₹ 10 ಸಾವಿರ ನಗದು ನೀಡಿ ಅವರನ್ನು ಗೌರವಿಸಲಾಯಿತು.
ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ ಪ್ರಶಸ್ತಿ ಪ್ರದಾನ ಮಾಡಿದರು. ಡಿವಿಜಿ ಬಳಗ ಪ್ರತಿಷ್ಠಾನದ ಜಿ.ಎಸ್.ನಟೇಶ್ ಇದ್ದರು.
ಪ್ರಶಸ್ತಿ ಮೊತ್ತ ₹ 10ಸಾವಿರವನ್ನು ಡಿವಿಜಿ ಕೃತಿಗಳ ಪ್ರಕಟಣೆಗೆ ಎ.ನರಸಿಂಹ ಭಟ್ ಅವರು ಬಳಗಕ್ಕೆ ಹಸ್ತಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.