ADVERTISEMENT

ಎಫ್‌ಡಿಐ ವಿರೋಧಿಸಿ 20ರಂದು ಹುಬ್ಬಳ್ಳಿಯಲ್ಲಿ ರ‌್ಯಾಲಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 19:30 IST
Last Updated 4 ಅಕ್ಟೋಬರ್ 2012, 19:30 IST

ಬೆಂಗಳೂರು: ಬಹುಬ್ರಾಂಡ್ ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡಿರುವ ಕೇಂದ್ರದ ಕ್ರಮವನ್ನು ಖಂಡಿಸಿ ಇದೇ 20ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನಾ ರ‌್ಯಾಲಿ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ.

ಪಕ್ಷದ ಯುವ ಘಟಕ ಪ್ರತಿಭಟನೆಯ ನೇತೃತ್ವ ವಹಿಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಹ್ಲಾದ ಜೋಶಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು. ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್‌ಗಳ ಬಳಕೆಗೆ ನಿರ್ಬಂಧ ವಿಧಿಸಿರುವುದರ ವಿರುದ್ಧ ಪಕ್ಷದ ಮಹಿಳಾ ಘಟಕಗಳು ಇದೇ 12ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.