ADVERTISEMENT

ಎರಡು ಉಪ ಮುಖ್ಯಮಂತ್ರಿ ಸ್ಥಾನ ಕೊಡಿ: ವಾಟಾಳ್‌ ಆಗ್ರಹ

ಹೈ.ಕ.ದ ಉಪ ಮುಖ್ಯಮಂತ್ರಿಗೆ ಹಣಕಾಸು ಖಾತೆ ಇರಲಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2018, 11:08 IST
Last Updated 4 ಜೂನ್ 2018, 11:08 IST
ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್   

ಕಲಬುರ್ಗಿ: ಹಿಂದುಳಿದಿರುವಿಕೆ ಹೋಗಲಾಡಿಸಲು ಹೈದರಾಬಾದ್ ಕರ್ನಾಟಕ ಹಾಗೂ ಉತ್ತರ ಕರ್ನಾಟಕಕ್ಕೆ ಎರಡು ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು.

ಹೈದರಾಬಾದ್ ಕರ್ನಾಟಕದ ಉಪ ಮುಖ್ಯಮಂತ್ರಿಗೆ ಹಣಕಾಸು ಇಲಾಖೆ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ರಜನಿಕಾಂತ್ ಅಭಿನಯದ ‘ಕಾಲಾ’ ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಅವಕಾಶ ನೀಡುವುದಿಲ್ಲ. ಜೂ.7ರಂದು ಬೆಂಗಳೂರಿನಲ್ಲಿ ಚಿತ್ರ ಪ್ರದರ್ಶನ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.