ADVERTISEMENT

ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನ: ಹಾಸನದ ಕಾವೇರಿಯಪ್ಪ ರಾಜ್ಯಕ್ಕೆ ಪ್ರಥಮ

​ಪ್ರಜಾವಾಣಿ ವಾರ್ತೆ
Published 7 ಜೂನ್ 2018, 15:21 IST
Last Updated 7 ಜೂನ್ 2018, 15:21 IST
ಎಂ.ಕೆ.ಕಾವೇರಿಯಪ್ಪ
ಎಂ.ಕೆ.ಕಾವೇರಿಯಪ್ಪ   

ಹಾಸನ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಗರದ ವಿಜಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಎಂ.ಕೆ.ಕಾವೇರಿಯಪ್ಪ 625ಕ್ಕೆ 625 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ.

625ಕ್ಕೆ 623 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದ ಕಾವೇರಿಯಪ್ಪ, ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯದಲ್ಲಿ 100 ಅಂಕ ಪಡೆದಿದ್ದಾರೆ. ಇದರಿಂದಾಗಿ 625ಕ್ಕೆ 625 ಅಂಕ ಪಡೆದಂತಾಗಿದೆ.

ಇದಕ್ಕೂ ಮುನ್ನ ಬೆಳಗಾವಿಯ ಮಹಮ್ಮದ್‌ ಕೈಫ್ ಮುಲ್ಲಾ ಅವರೂ ಸಹ ಮರುಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಎನಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.