ವಿಜಯಪುರ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಎ.ಬಿ.ಸಿ.ಡಿ ಗೊತ್ತಿಲ್ಲ. ಯಾರೋ ಚಿಲ್ಲರೆ ಜನ ಚೀಟಿಯಲ್ಲಿ ಬರೆದುಕೊಟ್ಟಿದ್ದನ್ನು ಹೇಳುತ್ತಿದ್ದಾರೆ. ಅವರು ಏಕವಚನದಲ್ಲಿ ನಿಂದಿಸುವುದನ್ನು ನಿಲ್ಲಿಸದಿದ್ದರೆ ನಾನೂ ಅವರ ವೈಯಕ್ತಿಕ, ರಾಜಕೀಯ ಜೀವನದ ಬಗ್ಗೆ ಏಕವಚನದಲ್ಲಿ ಮಾತನಾಡಬೇಕಾಗುತ್ತದೆ ಎಂದು ಸಚಿವ ಎಂ.ಬಿ. ಪಾಟೀಲ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಮ್ಮೆ ವಾಗ್ದಾಳಿ ಆರಂಭಗೊಂಡರೆ ನಾನು ಏನು ಮಾತನಾಡುತ್ತೇನೆ; ಅದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದು ನನಗೇ ಗೊತ್ತಿರುವುದಿಲ್ಲ’ ಎಂದು ಸಚಿವ ಎಂ.ಬಿ.ಪಾಟೀಲ ಕಿಡಿಕಾರಿದರು.
‘ಗುಂಡ್ಲುಪೇಟೆ ಚುನಾವಣೆ ಬಳಿಕ ಯಡಿಯೂರಪ್ಪ ಏಕವಚನದಲ್ಲಿ ವಾಗ್ದಾಳಿ ಆರಂಭಿಸಿದ್ದಾರೆ. ಎರಡು ಬಾರಿ ಸಹಿಸಿಕೊಂಡಿದ್ದೇನೆ. ನನ್ನ ತಾಳ್ಮೆ ಪರೀಕ್ಷಿಸಬಾರದು. ಪುನರಾವರ್ತನೆಯಾದರೆ ಸಹಿಸುವುದಿಲ್ಲ’ ಎಂದು ಎಚ್ಚರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.