ADVERTISEMENT

ಐ.ಟಿ. ದಾಳಿ: ಇಲಾಖೆಯ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2013, 19:59 IST
Last Updated 19 ಜುಲೈ 2013, 19:59 IST

ಬೆಂಗಳೂರು: ವೈದ್ಯಕೀಯ ಕಾಲೇಜ್‌ಗಳನ್ನು ನಡೆಸುತ್ತಿರುವ ಕೆಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾತ್ರ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ತಪಾಸಣೆ ನಡೆಸಿದ್ದು, ಯಾವುದೇ ಧಾರ್ಮಿಕ ಸಂಸ್ಥೆ, ಮಠದ ವಿರುದ್ಧ ದಾಳಿ ನಡೆಸಿಲ್ಲ ಎಂದು  ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ದಾಳಿಯು ಈ  ಶೈಕ್ಷಣಿಕ ಸಂಸ್ಥೆಗಳ ಚಟುವಟಿಕೆಗಳಿಗೆ ಮಾತ್ರ ಸಂಬಂಧಿಸಿತ್ತು. ಯಾವುದೇ ನಿರ್ದಿಷ್ಟ ಸಮುದಾಯ, ಧಾರ್ಮಿಕ ಸಂಸ್ಥೆ ಮತ್ತು ಮಠದ ವಿರುದ್ಧ ದಾಳಿ ನಡೆದಿಲ್ಲ ಎಂದು  ಕರ್ನಾಟಕ - ಗೋವಾ ವಲಯದ ಆದಾಯ ತೆರಿಗೆಯ (ತನಿಖೆ) ಮಹಾನಿರ್ದೇಶಕರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.