
ಪ್ರಜಾವಾಣಿ ವಾರ್ತೆಬೆಂಗಳೂರು: ವೈದ್ಯಕೀಯ ಕಾಲೇಜ್ಗಳನ್ನು ನಡೆಸುತ್ತಿರುವ ಕೆಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾತ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ತಪಾಸಣೆ ನಡೆಸಿದ್ದು, ಯಾವುದೇ ಧಾರ್ಮಿಕ ಸಂಸ್ಥೆ, ಮಠದ ವಿರುದ್ಧ ದಾಳಿ ನಡೆಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ದಾಳಿಯು ಈ ಶೈಕ್ಷಣಿಕ ಸಂಸ್ಥೆಗಳ ಚಟುವಟಿಕೆಗಳಿಗೆ ಮಾತ್ರ ಸಂಬಂಧಿಸಿತ್ತು. ಯಾವುದೇ ನಿರ್ದಿಷ್ಟ ಸಮುದಾಯ, ಧಾರ್ಮಿಕ ಸಂಸ್ಥೆ ಮತ್ತು ಮಠದ ವಿರುದ್ಧ ದಾಳಿ ನಡೆದಿಲ್ಲ ಎಂದು ಕರ್ನಾಟಕ - ಗೋವಾ ವಲಯದ ಆದಾಯ ತೆರಿಗೆಯ (ತನಿಖೆ) ಮಹಾನಿರ್ದೇಶಕರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.