ADVERTISEMENT

ಐ.ಟಿ ವಿಚಾರಣೆಗೆ ಸಚಿವ ಡಿ.ಕೆ.ಶಿವಕುಮಾರ್‌ ಹಾಜರು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2017, 20:26 IST
Last Updated 5 ಅಕ್ಟೋಬರ್ 2017, 20:26 IST

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಆದಾಯ ತೆರಿಗೆ (ಐ.ಟಿ) ಅಧಿಕಾರಿಗಳ ಎದುರು ಗುರುವಾರ ವಿಚಾರಣೆಗೆ ಹಾಜರಾದರು.

ಶಿವಕುಮಾರ್‌ ಮತ್ತು ಅವರ ಆಪ್ತರ ಮನೆ, ಕಚೇರಿ ಸೇರಿ 60 ಕಡೆ ದಾಳಿ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಘೋಷಿತ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.

ವಿಚಾರಣೆ ಬಳಿಕ ಮಾಧ್ಯಮ ಪ್ರತಿ ನಿಧಿಗಳ ಜತೆ ಮಾತನಾಡಿದ ಶಿವಕುಮಾರ್, ‘ಐ.ಟಿ ಅಧಿಕಾರಿಗಳು ಕೆಲವು ದಾಖಲೆ ಪತ್ರಗಳನ್ನು ನೀಡುವಂತೆ ತಿಳಿಸಿದ್ದರು. ಅವರು ಕೇಳಿದ ಎಲ್ಲ ದಾಖಲೆಗಳನ್ನು ಒದಗಿಸಿದ್ದೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.