ADVERTISEMENT

ಒಂದು ವಾರದಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸುವೆ : ಎಚ್.ವಿಶ್ವನಾಥ್

​ಪ್ರಜಾವಾಣಿ ವಾರ್ತೆ
Published 9 ಜೂನ್ 2017, 12:54 IST
Last Updated 9 ಜೂನ್ 2017, 12:54 IST
ಒಂದು ವಾರದಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸುವೆ : ಎಚ್.ವಿಶ್ವನಾಥ್
ಒಂದು ವಾರದಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸುವೆ : ಎಚ್.ವಿಶ್ವನಾಥ್   

ಮೈಸೂರು: ಒಂದು ವಾರದಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದಾಗಿ ಅಡಗೂರು ಎಚ್.ವಿಶ್ವನಾಥ್ ಶುಕ್ರವಾರ ಕೆ.ಆರ್.ನಗರದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ತಿಳಿಸಿದರು.

ಯಾವ ಪಕ್ಷ ಸೇರಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ರಾಜೀನಾಮೆ ನೀಡಿದ ಬಳಿಕ ಈ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
ಅಡಗೂರು ಎಚ್.ವಿಶ್ವನಾಥ್ ಅಭಿಮಾನಿಗಳ ಬಳಗ ಏರ್ಪಡಿಸಿದ್ದ ಸಭೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ರಂಜಾನ್‌ ನಂತರ ತೀರ್ಮಾನ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೈಸೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದು, ಈದ್‌ ಉಲ್‌ ಫಿತರ್ (ರಂಜಾನ್) ನಂತರ ವಿಶ್ವನಾಥ್ ಜೆಡಿಎಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.