ADVERTISEMENT

ಒಬಿಸಿ ಮೀಸಲು: ಐಐಎಂಸಿಯಲ್ಲಿ ಪ್ರಕ್ರಿಯೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2011, 19:30 IST
Last Updated 17 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಇತರೆ ಹಿಂದುಳಿದ ಜಾತಿಗಳ (ಒಬಿಸಿ) ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಶೇಕಡ 27ರಷ್ಟು ಮೀಸಲಾತಿ ನೀಡುವ ಪ್ರಕ್ರಿಯೆ ಕೋಲ್ಕತ್ತದ `ಭಾರತೀಯ ನಿರ್ವಹಣಾ ಸಂಸ್ಥೆ~ಯಲ್ಲಿ (ಐಐಎಂಸಿ) ಪೂರ್ಣಗೊಂಡಿದೆ ಎಂದು ಸಂಸ್ಥೆಯ ನಿರ್ದೇಶಕ ಶೇಖರ ಚೌಧರಿ ತಿಳಿಸಿದರು.

`ಐಐಎಂಸಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿದೆ. ದೇಶದ ಇನ್ನಿತರ ನಿರ್ವಹಣಾ ಸಂಸ್ಥೆಗಳಲ್ಲೂ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಅಥವಾ ಪೂರ್ಣಗೊಳ್ಳುವ ಹಂತದಲ್ಲಿದೆ~ ಎಂದು ಅವರು ತಿಳಿಸಿದರು.

ಐಐಎಂಸಿಯ ಹಳೆ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕ ಶನಿವಾರ ಇಲ್ಲಿ ಆಚರಿಸಿದ ಸಂಸ್ಥೆಯ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿವರ ನೀಡಿದರು. ರಾಷ್ಟ್ರದ ಉನ್ನತ ಶಿಕ್ಷಣ ಕೇಂದ್ರಗಳ (ಐಐಟಿ ಮತ್ತು ಐಐಎಂ) ಪ್ರವೇಶ ಪ್ರಕ್ರಿಯೆಯಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇಕಡ 27ರಷ್ಟು ಮೀಸಲಾತಿ ನೀಡಬೇಕು ಎಂದು ಕೇಂದ್ರ ಸರ್ಕಾರ 2006ರಲ್ಲಿ ನಿಯಮ ರೂಪಿಸಿತ್ತು.

ಕೇಂದ್ರ ಸರ್ಕಾರದ ಈ ನಿಯಮವನ್ನು ಕೆಲವು ಸಂಘಟನೆಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದವು. ಆದರೆ ಸುಪ್ರೀಂ ಕೋರ್ಟ್ 2008ರ ಏಪ್ರಿಲ್ 10ರಂದು ನೀಡಿದ್ದ ತೀರ್ಪಿನಲ್ಲಿ ಸರ್ಕಾರದ ನಿಯಮವನ್ನು ಎತ್ತಿಹಿಡಿದಿತ್ತು. ಐಐಎಂಸಿಯ ನಿರ್ದೇಶಕ ಅಜಿತ್ ಬಾಲಕೃಷ್ಣನ್, ಐಐಎಂಸಿ ಮುಖ್ಯಸ್ಥ ಪ್ರೊ. ಸೌಗತ ರೇ ಅವರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.