ADVERTISEMENT

ಕಟ್ಟಾ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2011, 12:55 IST
Last Updated 28 ಅಕ್ಟೋಬರ್ 2011, 12:55 IST
ಕಟ್ಟಾ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿಕೆ
ಕಟ್ಟಾ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿಕೆ   

ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನೀಡದ ಕ್ರಮ ಪ್ರಶ್ನಿಸಿ ಹಾಗೂ ವೈದ್ಯಕೀಯ ಅಂಶಗಳ ಆಧಾರದ ಮೇಲೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಅಕ್ಟೋಬರ್ 31ಕ್ಕೆ ಮುಂದೂಡಿತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 31 ಕ್ಕೆಮುಂದೂಡಿತು.

ನ್ಯಾಯಾಂಗ ಬಂಧನದಲ್ಲಿರುವ ಕಟ್ಟಾ ಅವರು ಸದ್ಯ ಕ್ಯಾನ್ಸರ್ ಚಿಕಿತ್ಸೆಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.