ADVERTISEMENT

ಕಡಲತೀರ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2013, 20:21 IST
Last Updated 1 ಸೆಪ್ಟೆಂಬರ್ 2013, 20:21 IST
ಕಾರವಾರದಲ್ಲಿ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಅಮೃತಾ ವಿದ್ಯಾಲಯದ ವಿದ್ಯಾರ್ಥಿಗಳು
ಕಾರವಾರದಲ್ಲಿ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಅಮೃತಾ ವಿದ್ಯಾಲಯದ ವಿದ್ಯಾರ್ಥಿಗಳು   

ಕಾರವಾರ: ಮಾತಾ ಅಮೃತಾನಂದಮಯಿ (ಅಮ್ಮ) ಅವರ 60ನೇ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಸದಾಶಿವಗಡದ ಅಮೃತಾ ವಿದ್ಯಾಲಯದ ವಿದ್ಯಾರ್ಥಿಗಳು ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯ ನಡೆಸಿದರು.

ಸೆ. 27-28ರಂದು ಕೇರಳದ ಅಮೃತಪುರಿಯಲ್ಲಿ ಅಮ್ಮನ ಜನ್ಮದಿನಾಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಸೆ. 1ರಂದು `ಶುಚಿತ್ವ ಆಂದೋಲನ'ವನ್ನು ಹಮ್ಮಿಕೊಂಡಿದ್ದು, ನಗರದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಡಲತೀರದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್‌ಗಳನ್ನು ಆಯ್ದು ಕಸದಬುಟ್ಟಿಗೆ ತುಂಬಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.