ADVERTISEMENT

‘ಕಣಕುಂಬಿಯಲ್ಲಿ ಗೋವಾ ವಿದ್ಯಾರ್ಥಿಗಳ ಸತ್ಯಾಗ್ರಹ’

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2018, 19:30 IST
Last Updated 27 ಫೆಬ್ರುವರಿ 2018, 19:30 IST

ಬೆಳಗಾವಿ: ಮಹದಾಯಿ ನದಿ ತಿರುವು ಯೋಜನೆಗೆ ವಿರೋಧಿಸಿ ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ, ಗೋವಾ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಅಲ್ಲಿನ ಲೋಕೋಪಯೋಗಿ ಸಚಿವ ಸುದಿನ ಢವಳೀಕರ ಹೇಳಿರುವುದು ಗೋವಾ ಪತ್ರಿಕೆಗಳಲ್ಲಿ ವರದಿಯಾಗಿದೆ.

ಈಚೆಗೆ ಪಣಜಿಯಲ್ಲಿ ಗೋವಾ ಯುವ ಮಂಚ್‌ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದು, ‘ಮಹದಾಯಿ ನೀರನ್ನು ತಿರುಗಿಸುವ ಕರ್ನಾಟಕದ ಯೋಜನೆಯನ್ನು ತಡೆದೇ ತೀರಲು ಪಣತೊಡಲಾಗಿದೆ. ಏಪ್ರಿಲ್‌ನಲ್ಲಿ ಕಾಲೇಜುಗಳ ಪರೀಕ್ಷೆಗಳು ಮುಗಿದ ಕೂಡಲೇ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಗೆ ಬರಬೇಕು. ಏಳು ತಾಸು ಸತ್ಯಾಗ್ರಹ ನಡೆಸಬೇಕು’ ಎಂದು ಹೇಳಿದ್ದಾರೆ.

‘ಹೋರಾಟಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು. ಮಹದಾಯಿ ಉಳಿಸಿಕೊಳ್ಳುವುದಕ್ಕೋಸ್ಕರ ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಿದ್ದೇವೆ ಎಂಬುದನ್ನು ಕರ್ನಾಟಕಕ್ಕೆ ತೋರಿಸಬೇಕು’ ಎಂದು ಸಚಿವರು ಹೇಳಿದ್ದಾಗಿ ಮಾಧ್ಯಮ ವರದಿಯಲ್ಲಿದೆ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.