ADVERTISEMENT

ಕನ್ನಡ, ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಅಮಾನತು

​ಪ್ರಜಾವಾಣಿ ವಾರ್ತೆ
Published 5 ಜೂನ್ 2017, 19:13 IST
Last Updated 5 ಜೂನ್ 2017, 19:13 IST
ಕನ್ನಡ, ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಅಮಾನತು
ಕನ್ನಡ, ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಅಮಾನತು   

ಬಾಗಲಕೋಟೆ: ಜಿಲ್ಲೆಯಲ್ಲಿ ಸಾಂಸ್ಕೃತಿಕ ಭವನಗಳ ನಿರ್ಮಾಣ ಕಾಮಗಾರಿ ಮತ್ತು ಕಡತ ವಿಲೇವಾರಿಯಲ್ಲಿ ವಿಳಂಬ ಹಾಗೂ ಕರ್ತವ್ಯಲೋಪದ ಆರೋಪದ ಮೇಲೆ ಇಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರ ಸೂಚನೆ ಮೇರೆಗೆ ಕರಿಶಂಕರಿ ಅವರನ್ನು ಅಮಾನತು ಮಾಡಿ ಇಲಾಖೆಯ ನಿರ್ದೇಶಕಿ ಅರ್ಚನಾ ಜೂನ್ 1ರಂದು ಆದೇಶಿಸಿದ್ದಾರೆ. ಶ್ರೀಶೈಲ ಕರಿಶಂಕರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೂ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT