ADVERTISEMENT

ಕರಾವಳಿಯಲ್ಲಿ ಮುಂಗಾರು ಕ್ಷೀಣ

​ಪ್ರಜಾವಾಣಿ ವಾರ್ತೆ
Published 19 ಜುಲೈ 2012, 19:30 IST
Last Updated 19 ಜುಲೈ 2012, 19:30 IST

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಗುರುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ. 

ಕೊಲ್ಲೂರಿನಲ್ಲಿ ಅತಿ ಹೆಚ್ಚು 7 ಸೆಂ.ಮೀ ಮಳೆಯಾಗಿದೆ. ಕದ್ರಾ, ಯಲ್ಲಾಪುರ 5, ಭಟ್ಕಳ, ಭಾಗಮಂಡಲ 4, ಸುಬ್ರಹ್ಮಣ್ಯ, ಗೇರುಸೊಪ್ಪ, ಅಂಕೋಲಾ, ನಿಲ್ಕುಂದ, ಶಿರಾಲಿ, ಖಾನಾಪುರ, ಆಗುಂಬೆ 3, ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು, ಮಂಕಿ, ಗೋಕರ್ಣ, ಕುಮಟಾ, ಕಾರವಾರ, ಮಡಿಕೇರಿ, ತಾಳಗುಪ್ಪ, ತೀರ್ಥಹಳ್ಳಿ, ಶೃಂಗೇರಿ, ಕೊಟ್ಟಿಗೆಹಾರ, ಕಮ್ಮರಡಿ, ಮೂಡಿಗೆರೆ, ಕೊಪ್ಪ, ಕೆ.ಆರ್.ನಗರ, ಶ್ರೀರಂಗಪಟ್ಟಣ 2, ಉಡುಪಿ, ಸುಳ್ಯ, ಕೋಟ, ಕಾರ್ಕಳ, ಕುಂದಾಪುರ, ಸಿದ್ದಾಪುರ (ಉಡುಪಿ ಜಿಲ್ಲೆ), ಶಿರಸಿ, ಸಿದ್ದಾಪುರ (ಉತ್ತರ ಕನ್ನಡ), ಹೊನ್ನಾವರ, ಬೆಳಗಾವಿ ವಿಮಾನ ನಿಲ್ದಾಣ, ಸೋಮವಾರಪೇಟೆ, ಸಾಗರ, ತ್ಯಾಗರ್ತಿ, ಹೊಸನಗರ, ಹುಂಚದಕಟ್ಟೆ, ಕಳಸ, ಜಯಪುರ, ಎನ್.ಆರ್.ಪುರ, ಸಕಲೇಶಪುರ, ನಾಗಮಂಗಲದಲ್ಲಿ 1ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಮತ್ತು ದಕ್ಷಿಣ ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಲವು ಪ್ರದೇಶಗಳು, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.