ADVERTISEMENT

ಕರ್ನಾಟಕ: ಏಳು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2012, 14:00 IST
Last Updated 19 ಡಿಸೆಂಬರ್ 2012, 14:00 IST

ಬೆಂಗಳೂರು (ಪಿಟಿಐ): ರಾಜ್ಯದಾದ್ಯಂತ ಏಳು ಮಂದಿ ಸರ್ಕಾರಿ ಅಧಿಕಾರಿಗಳ ಆವರಣಗಳ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ ಎಂದು ಲೋಕಾಯುಕ್ತದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ ಸೇರಿದಂತೆ ಒಟ್ಟು 22 ಕಡೆಗಳಲ್ಲಿ ದಾಳಿ ನಡೆದಿದೆ ಎಂದು ಲೋಕಾಯುಕ್ತ ಎಡಿಜಿಪಿ ಸತ್ಯ ನಾರಾಯಣರಾವ್ ಹೇಳಿದರು.

'ದಾಳಿ ಕಾರ್ಯಾಚರಣೆ ಇನ್ನೂ ಮುಂದುವರಿದೆ' ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.