ಕಲಬುರ್ಗಿ: ಇಲ್ಲಿನ ಮಹಾನಗರ ಪಾಲಿಕೆ ನೂತನ ಕಟ್ಟಡವನ್ನು ಮೇಯರ್ ಶರಣಕುಮಾರ ಮೋದಿ ಅವರು ಮಂಗಳವಾರ ಉದ್ಘಾಟಿಸಿದರು.
ಪಾಲಿಕೆ ಮೇಲೆ ಉರ್ದು ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ ಕನ್ನಡ ಹಾಗೂ ಮುಸ್ಲಿಂ ಸಂಘಟನೆಗಳ ಮಧ್ಯೆ ಗಲಾಟೆ ನಡೆದಿತ್ತು.
ಪೊಲೀಸರು ಎರಡೂ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಗಲಾಟೆಯ ಮಧ್ಯೆಯೇ ಪಾಲಿಕೆ ಕಟ್ಟಡದ ಮೇಲೆ ಕನ್ನಡ, ಇಂಗ್ಲಿಷ್ ಮತ್ತು ಉರ್ದು ನಾಮಫಲಕ ಅಳವಡಿಸಲಾಗಿತ್ತು. ಇದನ್ನು ಖಂಡಿಸಿ ಕನ್ನಡಪರ ಹಾಗೂ ಮುಸ್ಲಿಂ ಸಂಘಟನೆಗಳು ಮತ್ತೆ ಅಹೋರಾತ್ರಿ ಧರಣಿ ನಡೆಸಿದ್ದವು. ಇದಾದ ಬಳಿಕ ವಿವಾದಿತ ನಾಮಫಲಕ ತೆರವುಗೊಳಿಸಲಾಗಿತ್ತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.