ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಸಂಜೆ ಕಾಂಗ್ರೆಸ್ ಸಾಮರಸ್ಯ ಸಮಾವೇಶದ ವೇಳೆ ಉಂಟಾದ ಗುಂಪು ಘರ್ಷಣೆ ಮತ್ತು ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇವರನ್ನು ಭಾನುವಾರ ಹಿರಿಯ ಸಿವಿಲ್ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು. ಬಂಧಿತರನ್ನು ಕಲ್ಲಡ್ಕ ಸಮೀಪದ ಅಮ್ಟೂರು
ನಿವಾಸಿ ಪೂವಪ್ಪ ಟೈಲರ್, ನೆಟ್ಲ ನಿವಾಸಿಗಳಾದ ಗುರುವಪ್ಪ ಮತ್ತು ಕೇಶವ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ನಗರ ಠಾಣಾಧಿಕಾರಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತರಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಗರ ಠಾಣಾಧಿಕಾರಿ ಸಂಜಯ ಕುಮಾರ್ ಕಲ್ಲೂರ ಮಾತ್ರವಲ್ಲದೆ ಗಾಯಾಳು ಪೊಲೀಸ್ ಸಿಬ್ಬಂದಿ ಮುರುಗೇಶ, ಲೋಕೇಶ ಮತ್ತು ರಮೇಶ
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ.
ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಆದರೂ, 144 ಸೆಕ್ಷನ್ನಡಿ ಶನಿವಾರ ಜಾರಿಗೊಳಿಸಿದ್ದ ಮೂರು ದಿನಗಳ ನಿಷೇಧಾಜ್ಞೆ ಜಾರಿಯಲ್ಲಿ
ಇರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.