ADVERTISEMENT

ಕಲ್ಲಿದ್ದಲು ಪೂರೈಕೆ ಅಬಾಧಿತ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2011, 19:30 IST
Last Updated 15 ಅಕ್ಟೋಬರ್ 2011, 19:30 IST

ರಾಯಚೂರು: ತೆಲಂಗಾಣ ಹೋರಾಟ ದಿಂದ ಶನಿವಾರ ಆರ್‌ಟಿಪಿಎಸ್ ಕಲ್ಲಿದ್ದಲು ಪೂರೈಕೆಗೆ ಮತ್ತು ಗೂಡ್ಸ್ ರೈಲು ಸಂಚಾರಕ್ಕೆ ಯಾವುದೇ ಅಡ್ಡಿ ಆಗಿಲ್ಲ ಎಂದು ತಿಳಿದುಬಂದಿದೆ.

ಶನಿವಾರ ಮುಂಜಾನೆ ಐದು ರೇಕ್ ಕಲ್ಲಿದ್ದಲು ಪೂರೈಕೆಯಾಗಿದೆ. ಆರ್‌ಟಿಪಿಎಸ್‌ನ ಕಲ್ಲಿದ್ದಲು ಸಂಗ್ರಹಾಗಾರದಲ್ಲಿ ಇದೀಗ ಒಂದು ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ. ಐದು ಘಟಕ ಗಳಿಂದ 850 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗಿದೆ ಎಂದು ಆರ್‌ಟಿಪಿಎಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.