ಕಲಬುರ್ಗಿ: ಮೊಬೈಲ್ ಮತ್ತು ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಹನುಮಾನ್ ತಾಂಡಾ ನಿವಾಸಿ ಅರವಿಂದ ಪವಾರ್ ಎಂಬುವರನ್ನು ಇಲ್ಲಿನ ಶಹಾಬಜಾರ್ ಜಿಡಿಎ ಕಾಲೊನಿಯಲ್ಲಿ ಸಾರ್ವಜನಿಕರು ಮಂಗಳವಾರ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.
ಬೆಳಗಿನ ಜಾವ ವ್ಯಕ್ತಿಯೊಬ್ಬರ ಮೊಬೈಲ್ ಕದ್ದು ಓಡುತ್ತಿದ್ದ ಅರವಿಂದ ಅವರನ್ನು ಬೆನ್ನತ್ತಿ ಹಿಡಿದ ಸಾರ್ವಜನಿಕರು ಮನಸೋ ಇಚ್ಛೆ ಥಳಿದರು. ಆ ಬಳಿಕ ಪೊಲೀಸರಿಗೆ ಒಪ್ಪಿಸಿದರು.
‘ಮೊಬೈಲ್ ಮತ್ತು ಮನೆಗಳಲ್ಲಿ ಕಳ್ಳತನ ಮಾಡುವುದನ್ನೇ ಅರವಿಂದ ಕಾಯಕ ಮಾಡಿಕೊಂಡಿದ್ದು, ಥಳಿತದಿಂದ ಸಣ್ಣ ಪುಟ್ಟ ಗಾಯಗಳಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಚೌಕ್ ಪೊಲೀಸ್ ಠಾಣೆ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.