ADVERTISEMENT

ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ದಿ:  ಗುಜರಾತ್ ಸಿಎಂ ವಿಜಯ ರೂಪಾನಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2017, 9:05 IST
Last Updated 19 ಜೂನ್ 2017, 9:05 IST
ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ದಿ:  ಗುಜರಾತ್ ಸಿಎಂ ವಿಜಯ ರೂಪಾನಿ
ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ದಿ:  ಗುಜರಾತ್ ಸಿಎಂ ವಿಜಯ ರೂಪಾನಿ   

ಹಾವೇರಿ: ಮೋದಿ ಸರ್ಕಾರ ಮೂರು ವರ್ಷದಲ್ಲಿ ಭ್ರಷ್ಟಾಚಾರ ರಹಿತ,  ಉತ್ತಮ ಆಡಳಿತ ನೀಡಿದೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ಸೋಮವಾರ ಹೇಳಿದ್ದಾರೆ.

ಇಲ್ಲಿ ನಡೆಯುತ್ತಿರುವ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.  ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ದಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ಯುಪಿಎ ಸರ್ಕಾರ 10 ವರ್ಷಗಳಲ್ಲಿ ಸಾಕಷ್ಟು ಹಗರಣ ಮಾಡಿತ್ತು. ಮೋದಿ ಸರ್ಕಾರ ಮೂರು ವರ್ಷದಲ್ಲಿ ಭ್ರಷ್ಟಾಚಾರ ರಹಿತ,  ಉತ್ತಮ ಆಡಳಿತ ನೀಡಿದೆ ಎಂದರು.

ಕೇಂದ್ರ ಸರ್ಕಾರ ರೈತರಿಗಾಗಿ ಪ್ರಧಾನ ಮಂತ್ರಿ ಫಸಲ್  ಬಿಮಾ ಯೋಜನೆ ನೀಡಿದೆ,  ದೇಶದಲ್ಲಿ ಓನ್ ನೇಷನ್ ಓನ್ ಟ್ಯಾಕ್ಸ್ ಜಾರಿಗೆ ಬರುವ ನಿಟ್ಟಿನಲ್ಲಿ ಮೋದಿಜೀ GST ಯನ್ನು ದಿಟ್ಟವಾಗಿ ಜಾರಿಗೆ ತಂದಿದ್ದಾರೆ.

ADVERTISEMENT

ದೇಶದಲ್ಲಿ ಈಗ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಿವೃತ್ತ ಸೈನಿಕರ ಬಹುದಿನದ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿ, ಓನ್ ರ್ಯಾಂಕ್  ಪೆನ್ಷನ್ ಯೋಜನೆ ಜಾರಿಗೆ ತಂದಿದೆ,  ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ  ಉತ್ಪಾದನೆ ಹೆಚ್ಚಳ, ಉಜ್ವಲ ಯೋಜನೆ ಅಡಿ ಎರಡು ಕೋಟಿ ಜನರಿಗೆ ಉಚಿತ ಅಡುಗೆ ಅನಿಲ ನೀಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.